ಜೀವ ಜಡರೂಪ ಪ್ರಪಂಚವನದಾವುದೋ|
ಆವರಿಸಿಕೊಂಡುಮೊಳನೆರೆದುಮಿಹುದಂತೆ||
ಭಾವಕೊಳಪಡದಂತೆ ಅಳತೆಗಳವಡದಂತೆ|
ಆ ವಿಶೇಷಕ್ಕೆ ಮಣಿಯೊ - ಮಂಕುತಿಮ್ಮ|| ೨||
-ಚಿತ್ರಕೃಪೆ ಗೂಗಲೇಶ್ವರ |
Come and fall in the creative world of words. This blog will be all about dear ones, inspirational engines, who are/were engineering the track of my life.
-ಚಿತ್ರಕೃಪೆ ಗೂಗಲೇಶ್ವರ |
ಜಗತ್ತೇ ಒಂದು ಕಗ್ಗಂಟಾಗಿರುವಾಗ ಅದರೊಳಗೆ ಮಂಕುತಿಮ್ಮ ಎಂಬ ಪಾತ್ರದ ಮೂಲಕ, ಜಗತ್ತಿನ ವಿಶೇಷಗಳನ್ನು, ವಿಶಿಷ್ಟತೆಗಳನ್ನು, ತಾವು ಓದಿದ ಪುರಾಣ, ಪುಣ್ಯಕತೆಗಳು, ಐತಿಹಾಸಿಕ ಕ್ಷಣಗಳು, ತಾವು ಕೇಳಿದ ಜನಜನಿತ ಕತೆಗಳು, ಹಾಡುಗಳು, ಸಂಗತಿಗಳು, ತಮ್ಮ ಬದುಕಿನ ಕಥೆಗಳು.. ಜಗತ್ತಿನಲ್ಲಿ ನೆಡೆಯುವ ಅನೇಕಾನೇಕ ಪವಾಡಸದೃಶ್ಯಗಳನ್ನು ನಾಲ್ಕು ಸಾಲುಗಳಲ್ಲಿ ಹಿಡಿದಿಡುತ್ತಾ, ಸಾರ್ವಕಾಲಿಕ ಸತ್ಯವಾದ ಕಗ್ಗಗಳನ್ನು ಸೃಷ್ಟಿಸಿರುವ ಕಗ್ಗದ ಅಜ್ಜನಿಗೆ ನಮಿಸುತ್ತಾ.. ಈ ಜೈತ್ರಯಾತ್ರೆಯನ್ನು ಆರಂಭಿಸುತ್ತಿದ್ದೇನೆ..
ಚಿತ್ರಕೃಪೆ - ಗೂಗಲೇಶ್ವರ |
ಇಂದು ಅವರ ಜನುಮದಿನ, ಶುಭಾರಂಭವಾಗಲಿ, ಅಜ್ಜನ ಆಶೀರ್ವಾದ ಈ ಸರಣಿಗೆ ಉಸಿರು ತುಂಬಲಿ ಎಂದು ಆಶಿಸುತ್ತಾ, .. ಈ ಪುಟ್ಟ ಪುಟ್ಟ ಹೆಜ್ಜೆಯನ್ನು ಇಡಲು ಶುರು ಮಾಡುತ್ತೇನೆ!!!
******
ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಲೋಲ, ದೇವ ಸರ್ವೇಶ ಪರಬ್ಬೊಮ್ಮನೆಂದು ಜನಂ|| ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ| ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ|| ೧||
ಅಣ್ಣಾವ್ರ "ನಾನೂ ನೀನೂ ನೆಂಟರಯ್ಯ .. ನಮಗೆ ಭೇದ ಇಲ್ಲವಯ್ಯಾ ವಿಠ್ಠಲ .. " ಭಕ್ತ ಕುಂಬಾರದ ಅದ್ಭುತ ಹಾಡು ಬರುತಿತ್ತು.. ಮನೆಯ ಕರೆಘಂಟೆ ಸದ್ದು ಮಾಡಿತು..
ಬಾಗಿಲು ತೆಗೆದರೆ ಅಹಲ್ಯೆ ಮತ್ತು ಶಬರಿ .. ಬಿಳಿ ಉಡುಪಿನಲ್ಲಿ ಆಕರ್ಷಕವಾಗಿ ಕಾಣುತ್ತಿದ್ದರು..
ಅರೆ ನೀವು ನನ್ನ ಮನೆಯ ಬಾಗಿಲಲ್ಲಿ.. "ವೆಲ್ಕಮ್ ವೆಲ್ಕಮ್.. "
ನಗುತ್ತಾ ಅಹಲ್ಯೆ ಮತ್ತು ಶಬರಿ ಒಳಗೆ ಬಂದರು.. ಸಾಂಪ್ರದಾಯಿಕವಾದ ಸ್ವಾಗತ ನೆಡೆಯಿತು.. ಹಣೆಯಲ್ಲಿ ಕುಂಕುಮ.. ನಿಗಿ ನಿಗಿ ಹೊಳೆಯುತ್ತಿತ್ತು.. ಒಬ್ಬರ ಪ್ರತಿರೂಪ ಒಬ್ಬರು.. ಅಚಾನಕ್ ನೋಡಿದರೆ ಅಹಲ್ಯೆ ಶಬರಿ ಇಬ್ಬರೂ ಅಕ್ಕ ತಂಗಿ ಎನ್ನಬಹುದಿತ್ತು.. ಹಾಗಿದ್ದರೂ.. ಅದೇ ರೂಪ, ಅದೇ ಮುಖ.. ಅದೇ ನಗು.. ಆದರೆ ಅಹಲ್ಯೆ ಕಣ್ಣುಗಳು ಹೊಳೆಯುತ್ತಿದ್ದವು.. ಶಬರಿ ಕಣ್ಣುಗಳು ಮಿನುಗುತ್ತಿದ್ದವು..
ಶಬರಿ ನಸು ನಗುತ್ತಾ ಒಳಗೆ ಕಾಲಿಟ್ಟಳು.. ಅಹಲ್ಯೆ ಹಾಯ್ ಎನ್ನುತ್ತಾ ನಗುವ ಕಂಗಳ ಜೊತೆ ಒಳಗೆ ಬಂದಳು.. ಸುಮ್ಮನೆ ಇರದ ಕ್ಯಾಮೇರಾ ಕಚ ಕಚ ಅಂತ ಫೋಟೋ ತೆಗೆಯುತಿತ್ತು..
ಸುಂದರ ದೃಶ್ಯ.. ಕಂಗಳು ಮಂಜಾಗಿದ್ದವು.. ಆದರೆ ಕ್ಯಾಮೆರಾ ಕಣ್ಣುಗಳು ಅಲ್ಲ.. ಆ ಕ್ಷಣಗಳನ್ನು ಆಸ್ವಾಧಿಸುವುದೇ ಒಂದು ಅದ್ಭುತ ಅನುಭವ..
ಉಭಯಕುಶಲೋಪರಿ ಮಾತುಗಳು ಆದವು.. ಅಹಲ್ಯೆ ಕಲ್ಲಾಗಿದ್ದವಳು ಶ್ರೀ ರಾಮನ ಪಾದ ಸ್ಪರ್ಶದಿಂದ ಮತ್ತೆ ಮರಳಿದ್ದಳು.. ಅಹಲ್ಯೆ ಶ್ರೀ ರಾಮನ ಅಂಶವಾಗಿದ್ದಳು..ಶ್ರೀ ರಾಮನನ್ನು ಅನುಕ್ಷಣವೂ ಜಪಿಸುವಂಥಹ, ನೆನಪಿಸುವಂತಹ ದಿವ್ಯ ಬದುಕಾಗಿತ್ತು.. ನೋಡುತ್ತಾ ನೋಡುತ್ತಾ ಬದುಕು ಅಹಲ್ಯೆಯ ಬದುಕು ಸುಂದರವಾಗಿತ್ತು.. ಶ್ರೀ ರಾಮನ ಸಾನಿಧ್ಯವೇ ಆಕೆಯ ಬದುಕಿನ ಮಂತ್ರವಾಗಿತ್ತು..
ಶಬರಿ ಶ್ರೀ ರಾಮನ ಬರುವಿಕೆಗಾಗಿ ಅತ್ಯುತ್ತಮ ಹಣ್ಣುಗಳನ್ನು ಆರಿಸಿ ಆರಿಸಿ ಶ್ರೀ ರಾಮನಿಗೆ ಕೊಡಲು ಇಟ್ಟಿದ್ದು.. ಅದನ್ನು ಶ್ರೀ ರಾಮನಿಗೆ ಕೊಟ್ಟ ಮೇಲೆ ತನ್ನ ಬದುಕಿನ ಸಾರ್ಥಕ್ಯ ಕಂಡಿದ್ದು ಇದು ನಿಮಗೆಲ್ಲ ತಿಳಿದ ವಿಚಾರವೇ.. ಇಲ್ಲಿ ಸ್ವಲ್ಪ ಬದಲಾವಣೆಯಿತ್ತು..
ಶಬರಿ ಶ್ರೀ ರಾಮನಿಗೆ ಹಣ್ಣುಗಳನ್ನು ಕೊಡುವ ಬದಲು ಸಿಹಿ ತಂದಿದ್ದಳು.. ಶ್ರೀ ರಾಮನಿಗೆ ಅಚ್ಚರಿ, ಖುಷಿ ಎಲ್ಲವೂ ಕಣ್ಣುಗಳಲ್ಲಿ ತುಂಬಿತ್ತು.. ಮಾತುಗಳು ಆಡಲಾರದಷ್ಟು ಖುಷಿ.. ಯಾಕೆಂದರೆ.. ಶ್ರೀ ರಾಮನನ್ನು ಕಂಡು ಶಬರಿಗೆ ಖುಷಿ ಮನದಲ್ಲಿಯೇ ಮೂಡಿದ್ದರೆ.. ಶಬರಿಯ ಕಂಡು ಶ್ರೀ ರಾಮನಿಗೆ ಈ ಬಾರಿ ಧನ್ಯತಾ ಭಾವ .. ತನ್ನ ಮನೆಗೆ ಮಗಳು ಬಂದಷ್ಟು ಖುಷಿ. ...
ಶಬರಿ ಹಣ್ಣುಗಳನ್ನು ಕಚ್ಚಿ ಒಳ್ಳೆಯ ಹಣ್ಣುಗಳನ್ನೇ ಕೊಟ್ಟ ಹಾಗೆ.. ಇಲ್ಲಿ ಶಬರಿ ತಂದಿದ್ದ ಸಿಹಿಯನ್ನು ಅವಳಿಗೆ ಒಂದು ತುಂಡು ತಿನ್ನಿಸಿ..Hope you don't mind ಎಂದಾಗ.. ಶಬರಿಯ ಕಣ್ಣುಗಳ ಹೊಳಪನ್ನು ಕಂಡಾಗ ಅರೆ ಇದನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆ ಹಿಡಿಯಬಾರದಿತ್ತೇ ಅನಿಸಿದ್ದು ಸುಳ್ಳಲ್ಲ..
ಕೆಲವು ಅನುಭವಗಳನ್ನು ಅನುಭವಿಸೋದು .. ಆ ಅನುಭವವನ್ನು ಅಕ್ಷರ ರೂಪದಲ್ಲಿ ಹಿಡಿದಡೋದು ಎಲ್ಲವೂ ಒಂದು ಅದ್ಭುತ ಪಯಣದ ಮೈಲಿಗಲ್ಲುಗಳು..
ಮಗಳು ತಾಯಿಯ ಸಮಾನ ಅಂತಾರೆ.. ತಾಯಿಯನ್ನು ಇನ್ನೊಂದು ರೂಪದಲ್ಲಿ ಕಂಡು.. ಅದರ ಸಾಕ್ಷಾತ್ಕಾರವಾಗಿ ತಣ್ಣಗೆ ಇದನ್ನೆಲ್ಲಾ ಗಮನಿಸುತ್ತಿದ್ದ ತುಷಾರ ಹಾರದವಳ ನಸು ನಕ್ಕು ಖುಷಿಪಡುತ್ತಿದ್ದಳು ..
"ಶ್ರೀ ರಾಮ ಬಂದವ್ನೆ ಸೀತೆಯ ಕಾಣಲಿಕ್ಕೆ" ಹಾಡು ಪಡುವಾರಹಳ್ಳಿ ಪಾಂಡವರು ಚಿತ್ರದಲ್ಲಿ ಬಂದಿದ್ದಾರೆ.. "ಕಾದಿರುವಳು ಶಬರಿ ಶ್ರೀ ರಾಮ ಬರುವನೆಂದು" ಶಾಲೆಯಲ್ಲಿ ಓದಿದ ಪದ್ಯ ನೆನಪಿಗೆ ಬಂತು..
ಇದೊಂದು ಅದ್ಭುತ ಅನುಭವ.. ಅಹಲ್ಯೆ, ಶಬರಿ, ತುಷಾರ, ಶ್ರೀ ರಾಮ ಎಲ್ಲರೂ ಧನ್ಯತಾ ಭಾವ ಅನುಭವಿಸುತ್ತಿದ್ದರು..!!!
ಶ್ರೀ ರಾಮನಂತೂ ಈ ಖುಷಿಯ ಸಂಗತಿಗಳಿಂದ ಪುಟ್ಟ ಹುಡುಗನಾಗಿ ಬಾಲರಾಮನೇ ಆಗಿ ನಲಿಯುತಿದ್ದ!
ಇರುವ ಮನೆಯೇ ಮಂದಿರವಾಗಿ.. ಅದೇ ಭವ್ಯ ಮಹಲಾಗಿ ಪರಿವರ್ತನೆಯಾದಂತೆ ಅನುಭವ.. ಮಹಲಿನ ಪ್ರತಿ ಕಣವೂ ಬೆಳಕಿನ ಪುಂಜದಿಂದ ಹೊಳೆಯಲು ಶುರು ಮಾಡಿತು.. !
ನಾಲ್ಕನೇ ತರಗತಿಯಲ್ಲಿ ರನ್ನನ ಗಧಾಯುದ್ಧದ ಒಂದು ಭಾಗ "ಊರುಭಂಗ" ಪಾಠವಿತ್ತು.. ವಿದ್ಯೆ ಕಲಿಯಬೇಕೆಂಬ ಆಸೆ ಹೊತ್ತು ಗುರುಗಳ ಬಳಿಗೆ ಬಂದಾಗ
ರನ್ನನ ಪೂರ್ವಾಪರ ವಿಚಾರ ತಿಳಿದು " ಕೊಂಡು ತಂದು ಹೊತ್ತು ಮಾರಲು ವಿದ್ಯೆಯೇನು ಬಳೆಯ ಮಲಾರವೇ!" ಎಂದು ಹೇಳುತ್ತಾರೆ..
ಆದರೂ ಛಲ ಬಿಡದ ರನ್ನ ವಿದ್ಯೆ ಕಲಿತು.. ಮಹಾನ್ ಕವಿಯಾಗುತ್ತಾರೆ.
ಆ ಪಾಠ ಓದಿ, ದುರ್ಯೋಧನ ಅಲಿಯಾಸ್ ರನ್ನ ಹೆಸರಿಸುವ ಸುಯೋಧನನ ಊರುಭಂಗ ಪಾಠ ನನ್ನ ಮಹಾಭಾರತದ ಹುಚ್ಚಿಗೆ ನಾಂದಿಯಾಯಿತು.. ನಂತರ ಏಳನೇ ತರಗತಿಯಲ್ಲಿ ಸೌಗಂಧಿಕಾ ಪುಷ್ಪ ಹರಣ ಪಾಠ ಮಹಾಭಾರತದ ಹುಚ್ಚಿಗೆ ಇನ್ನಷ್ಟು ನೀರೆರೆಯಿತು..
ಎಂಭತ್ತರ ದಶಕದ ಅಂತ್ಯದಲ್ಲಿ ದೂರದರ್ಶನದಲ್ಲಿ ಪ್ರಸಾರವಾದ ಬಿ ಆರ್ ಚೋಪ್ರಾ ಅವರ ಮಹಾಭಾರತ ಖುಷಿಕೊಟ್ಟಿತು. ಅಂದಿನಿಂದ ಇಂದಿನ ತನಕ ಮರುಪ್ರಸಾರವಾದಾಗೆಲ್ಲ ಬಹುಶಃ ಎಲ್ಲಾ ಕಂತುಗಳನ್ನು ನೋಡಿದ್ದೇನೆ ಮತ್ತು ಮುಂದೂ ನೋಡುತ್ತೇನೆ.
ಪ್ರತಿಯೊಂದು ದೃಶ್ಯವೂ ಒಂದು ಅದ್ಭುತ ಸಂಯೋಜನೆ.. ಅಭಿನಯ, ಸೆಟ್ಟುಗಳು, ಸಂಭಾಷಣೆ, ಪಾತ್ರಧಾರಿಗಳ ಆಯ್ಕೆ (ಹ ಕೆಲವೊಂದು ಪಾತ್ರಗಳು ಬೇರೆ ಕಲಾವಿದರ ಆಯ್ಕೆ ಬೇಕು ಅನಿಸಬಹುದೇನೋ, ಆದರೆ ನನಗೆ ಓಕೆ), ಸಂಗೀತ, ಹಾಡುಗಳು ಎಲ್ಲವೂ ಅದ್ಭುತ.
ನನಗೆ ಬಲು ಇಷ್ಟವಾದ ಅನೇಕ ದೃಶ್ಯಗಳಲ್ಲಿ ಎರಡನ್ನು ಇಲ್ಲಿ ಉಲ್ಲೇಖಿಸುತ್ತೇನೆ.
ಒಂದನೇ ದೃಶ್ಯ
ಭೀಷಣ ಪ್ರತಿಜ್ಞೆ ಮಾಡಿದ ದೇವವ್ರತ ತನಗೆ ಗೊಂದಲವಾದಾಗೆಲ್ಲ ತನ್ನ ತಾಯಿ ಗಂಗೆಯ ತೀರಕ್ಕೆ ಬಂದು ತಾಯಿಯನ್ನು ಕಂಡು ಮಾತಾಡಿ ಗೊಂದಲ ಪರಿಹರಿಸಿಕೊಳ್ಳುವುದು ರೂಢಿಯಾಗಿರುತ್ತದೆ. ಇದರಿಂದ ಬೇಸತ್ತ ಗಂಗೆ ಒಮ್ಮೆ ಭೀಷ್ಮನಿಗೆ ಹೇಳುತ್ತಾಳೆ "ನೀನು ಸಣ್ಣ ಮಗುವಿನ ತರಹ ಪ್ರತಿಬಾರಿಯೂ ದೂರುಗಳನ್ನು ತಂದು ನನಗೆ ಒಪ್ಪಿಸುತ್ತೀಯಾ.. ನಿನ್ನ ತಂದೆಗೆ ನೀನು ಮದುವೆಯಾಗೋಲ್ಲ ಅಂತ ಶಪಥ ಮಾಡಿದಾಗ ನನಗೆ ಹೇಳಲಿಲ್ಲ ನನ್ನ ಒಪ್ಪಿಗೆ ಪಡೆಯಲಿಲ್ಲ.. ನೀನು ಜೀವನದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಂಡಾಗ ನನ್ನ ಕೇಳಲಿಲ್ಲ ಆದರೆ ನಿನಗೆ ಸಮಸ್ಯೆ ಬಂದಾಗ ನನ್ನ ಬಳಿ ಓಡಿ ಬರುತ್ತೀಯ" ಎಂದಾಗ ಭೀಷ್ಮ ಕಣ್ಣಲ್ಲಿ ನೀರು ತುಂಬಿಕೊಂಡು "ಸರಿ ಮಾತೆ ಇನ್ನು ನೀನಾಗೆ ಬರುವ ತನಕ ನಾ ನಿನ್ನ ಬಳಿ ಬರುವುದಿಲ್ಲ" ಎಂದು ಹೇಳುತ್ತಾನೆ ಗಂಗೆ ಮಾಯವಾಗುತ್ತಾಳೆ.
ಇಲ್ಲಿ ಗಂಗೆ ಪಾತ್ರಧಾರಿ ಕಿರಣ್ ಜುನೇಜಾ ಅದ್ಭುತಾವಾಗಿ ಮಾತಾಡುತ್ತಾಳೆ.. ಕಣ್ಣಿನ ಹೊಳಪು ಆ ಬಿಳಿ ಪೋಷಾಕು ಅದ್ಭುತವಾಗಿ ಕಾಣುತ್ತಾಳೆ. ಹಾಗೆಯೇ ತಾಯಿಯ ಮಮತೆಪೂರ್ಣ ಮಾತುಗಳು, ಅಭಿನಯ ಗಮನಸೆಳೆಯುತ್ತದೆ.
ಭೀಷ್ಮನ ಪಾತ್ರಧಾರಿ ಮುಖೇಶ್ ಖನ್ನಾ ಬಗ್ಗೆ ಏನು ಹೇಳುವುದು, ಭೀಷ್ಮರೇ ಧರೆಗೆ ಬಂದರೂ ಮುಖೇಶ್ ಅವರಿಗೆ ಶಭಾಷ್ ಹೇಳದೆ ಹೋಗುವುದಿಲ್ಲ. ಅಷ್ಟು ಅದ್ಭುತ ಅಭಿನಯ. ಭೀಷ್ಮನಾಗಿಯೇ ಜೀವಿಸಿದ್ದಾರೆ.
ಅವರ ಪ್ರತಿ ಮಾತುಗಳು, ಸಂಭಾಷಣೆಯ ಏರಿಳಿತ ಅದ್ಭುತ.
ನಾವು ತೆಗೆದುಕೊಳ್ಳುವ ನಿರ್ಧಾರ ಪರಿಣಾಮ ಎದುರಿಸುವ ಶಕ್ತಿಯೂ ನಮಗೆ ಬರಬೇಕು.. ನಮಗೆ ಇರಬೇಕು.. ನಿರ್ಧಾರ ನಮ್ಮದು ಪರಿಹಾರ ಇನ್ನೊಬ್ಬರು ಕೊಡುವುದು ಎಂದು ಕುಳಿತಾಗ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತದೆ. ಭೀಷ್ಮ ತನ್ನ ತಂದೆಗೂ ಹೇಳದೆ ತಾಯಿಯ ಸ್ಥಾನಕ್ಕೆ ಬರಬಹುದಾದ ಸತ್ಯವತಿಯ ತಂದೆಗೆ ಕೊಡುವ ಮಾತು.. ಆದರೆ ಆ ಸಮಯದಲ್ಲಿ ಗಂಗೆಯೂ ಇರುವುದಿಲ್ಲ, ಶಾಂತನೂ ಕೂಡ ಇರುವುದಿಲ್ಲ. ಆ ಸಮಯದಲ್ಲಿ ಸರಿ ಅನಿಸುವ ನಿರ್ಧಾರ ಭೀಷ್ಮ ತಳೆಯುತ್ತಾನೆ ಆದರೆ ಅದರ ಪರಿಣಾಮ ಶರಶಯ್ಯೆಗೆ ತಂದು ನಿಲ್ಲಿಸುತ್ತದೆ.
ಎರಡನೆಯ ದೃಶ್ಯ
ಭೀಷ್ಮ ಇಚ್ಚಾಮರಣಿ, ಅವ ಇರುವ ತನಕ ಪಾಂಡವರು ಕುರುಕ್ಷೇತ್ರದ ಯುದ್ಧದಲ್ಲಿ ಏನೂ ಸಾಧಿಸಲಾಗದೆ ಚಿಂತಾಕ್ರಾಂತರಾಗಿರುತ್ತಾರೆ. ಆಗ ಕೃಷ್ಣನ ಮಾತಿನಂತೆ ಭೀಷ್ಮರ ಹತ್ತಿರ ಬಂದಾಗ ತಾನು ನಾರಿಯ ಮುಂದೆ ಯುದ್ಧ ಮಾಡುವುದಿಲ್ಲ ಎಂದು ತನ್ನನ್ನು ರಣರಂಗದಿಂದ ದೂರಮಾಡುವ ಉಪಾಯ ಹೇಳಿಕೊಡುತ್ತಾನೆ. ಆಗ ರಾತ್ರಿ ಭೀಷ್ಮ ಕುರುಕ್ಷೇತ್ರಕ್ಕೆ ಬರುತ್ತಾನೆ.. ಒಂದು ಹೆಂಗಸು ಭೂಮಿಯಲ್ಲಿನ ಸಣ್ಣ ಸಣ್ಣ ಕಲ್ಲುಗಳನ್ನು ಆರಿಸುತ್ತಿರುವುದನ್ನು ಕಂಡು.. ಹತ್ತಿರ ಬಂದಾಗ ಗೊತ್ತಾಗುತ್ತದೆ ಇದು ತನ್ನ ತಾಯಿ ಗಂಗೆ ಎಂದು.
ಅತೀವವಾದ ಖುಷಿಯಿಂದ ಹತ್ತಿರ ಬಂದು ಮಾತಾಡಿಸಿದಾಗ.. ಗಂಗೆ ಹೇಳುತ್ತಾಳೆ ನೆಲವನ್ನು ಸ್ವಚ್ಛಗೊಳಿಸುತ್ತಿದ್ದೆ.. ನೀನು ಇಲ್ಲಿ ಮಲಗಿಕೊ, ತುಂಬಾ ದಣಿದಿದ್ದೀಯ.. ನಿನಗೆ ವಿಶ್ರಾಂತಿ ಬೇಕು" ಎಂದಾಗ ಭೀಷ್ಮ ಎಲ್ಲಾ ಋಣವನ್ನು ಕೊಟ್ಟು ಮುಗಿಸಿದೆ.. ಆದರೆ ಅಂಬಾಳ ಋಣವೊಂದಿದೆ.. ನಾಳೆ ಅದನ್ನು ತೀರಿಸುತ್ತೇನೆ.."
ಬಂದು ಬಿಡು ಸ್ವರ್ಗಕ್ಕೆ ಎಂದು ಗಂಗೆ ಹೇಳಿದಾಗ.. ಹಸ್ತಿನಾಪುರ ನಾಲ್ಕು ದಿಕ್ಕುಗಳಿಂದ ಸುರಕ್ಷಾ ಸ್ಥಿತಿಯಲ್ಲಿದೆ ಎಂದು ಅರಿವಾದಾಗ ಖಂಡಿತ ಬರುತ್ತೇನೆ ಎಂದು ಹೇಳಿ ಗಂಗೆಯನ್ನು ಕಳಿಸುತ್ತಾನೆ.
ನಿಜ ನಾವು ತೆಗೆದುಕೊಳ್ಳುವ ನಿರ್ಧಾರದ ಫಲಿತಾಂಶ ನಮಗೆ ಗೊತ್ತಾಗಿ ಬಿಟ್ಟರೆ, ನಿರ್ಧಾರ ತೆಗೆದುಕೊಳ್ಳುವ ಗಟ್ಟಿ ಮನಸ್ಸು ಪೊಳ್ಳಾಗಿಬಿಡುತ್ತದೆ. ತನ್ನ ಒಂದು ನಿರ್ಧಾರ ಕುರುಕ್ಷೇತ್ರದ ಶರಶಯ್ಯೆಯಲ್ಲಿ ಕೊನೆಗೊಳ್ಳುತ್ತದೆ ಎಂದು ತಿಳಿದಿದ್ದಿದರೆ ಭೀಷ್ಮ ಅವರ ನಿರ್ಧಾರ ಖಂಡಿತ ಅಷ್ಟೊಂದು ಭೀಷಣವಾಗಿ ಇರುತ್ತಿರಲಿಲ್ಲ ಅಲ್ಲವೇ.
ಆ ಸಮಯಕ್ಕೆ ಸರಿ ಅನ್ನೊದು ನಾವು ನಮ್ಮ ಮನಸ್ಸಿನ ಸ್ಥಿತಿಯ ಮೇಲೆ ಅವಲಂಬಿತ.
ಅದ್ಭುತ ಸನ್ನಿವೇಶಗಳು..
ಭೀಷ್ಮ ಉತ್ತರಾಯಣ ಪುಣ್ಯ ಕಾಲದಲ್ಲಿ ಈ ಭುವಿಯನ್ನು ಬಿಡುವ ನಿರ್ಧಾರ ಮಾಡಿದ ಸಮಯವಿದು.. ಸಂಕ್ರಾಂತಿ ನಮ್ಮ ಬದುಕಲ್ಲಿ ಒಂದು ಸಣ್ಣ ಕ್ರಾಂತಿಯನ್ನು ತರುವ ಒಂದು ನಿರ್ಧಾರ ನಮ್ಮದಾಗಿದೆ ಎಂದರೆ ಅದೇ ಅಲ್ಲವೇ Someಕ್ರಾಂತಿ.
ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು!
ಪುಟ್ಟ ವಯಸ್ಸಿನಲ್ಲಿಯೇ ಪಾರು ಮತ್ತೆ ಪರಮು ಅರ್ತಾತ್ ಪಾರ್ವತೀ ಮತ್ತು ಪರಮೇಶ ತಂದೆತಾಯಿಯನ್ನು ಕಳೆದುಕೊಂಡಿದ್ದರು.. ಬಂಧು ಬಳಗ ಎಲ್ಲರೂ ಇವರನ್ನು ದೂರವಿಟ್ಟಿದ್ದರು.. ಇವರಿಬ್ಬರೂ ಒಂದೇ ಬೀದಿಯಲ್ಲಿ ಆಡಿ ಬೆಳೆದವರು.. ಪ್ರೀತಿ ಪ್ರೇಮ ಎಂಬ ಹಂಗಿಗೆ ಹೋಗಿರಲಿಲ್ಲ ಆದರೆ ಪರಿಚಯ ಚೆನ್ನಾಗಿದ್ದರಿಂದ, ಜೊತೆಯಲ್ಲಿಯೇ ಹೆಗಲಿಗೆ ಹೆಗಲು ಕೊಟ್ಟು ಬೆಳೆದರು.
ತುಂಡು ಭೂಮಿ ಇಬ್ಬರಿಗೂ ಇತ್ತು.. ಬದುಕಲು ಆಶ್ರಯ ಕೊಡುವ ಸಣ್ಣದಾದ ಮನೆಯೊಂದಿತ್ತು.. ಹೇಗೋ ಬಂಧು ಮಿತ್ರರು ಇವರನ್ನು ದೂರವಿಟ್ಟಿದ್ದರಿಂದ, ಅಸ್ತಿ ಅದು ಇದು ಅನ್ನುವ ತಗಾದೆ ಇರಲಿಲ್ಲ.. ಎತ್ಲಾಗಾದರೂ ಹೋಗಿ ಸಾಯಲಿ ಎಂದು ಎಲ್ಲರೂ ದೂರ ಇಟ್ಟಿದ್ದು ಒಂದು ರೀತಿಯಲ್ಲಿ ಒಳ್ಳೆಯದೆ ಆಗಿತ್ತು..
ಚಿತ್ರಕೃಪೆ - ಗೂಗಲೇಶ್ವರ |
ಹೊಲದಲ್ಲಿ ಕಷ್ಟಪಟ್ಟು ಏನು ಸಾಧ್ಯವೋ ಅದನ್ನು ಬೆಳೆಯುತ್ತಿದ್ದರು, ಸೊಪ್ಪು, ತರಕಾರಿ, ಬೆಳೆ, ಶುಂಠಿ, ಭತ್ತ, ರಾಗಿ ಹೀಗೆ ಆ ಕಾಲಕ್ಕೆ ಏನು ಫಸಲು ಬರಲು ಸಾಧ್ಯವೋ ಅದನ್ನೇ ಆ ತುಂಡು ಭೂಮಿಯಲ್ಲಿ ಬೆಳೆಯುತ್ತಿದ್ದರು.. ಊಟಕ್ಕೆ ಮೋಸವಿರಲಿಲ್ಲ.. ಜೊತೆಗೆ ಬೆಳೆದ ಸಂಪನ್ನದಿಂದ ಅದನ್ನು ಮಾರಿ ಒಂದಷ್ಟು ದುಡ್ಡು ಕೂಡಿಡುತ್ತಿದ್ದರು..
ಚಿತ್ರಕೃಪೆ - ಗೂಗಲೇಶ್ವರ |
ಶಾಲೆಯಲ್ಲಿ ಓದು ಸಾಗಿತ್ತು.. ಬೆಳೆದ ನಂತರ ಮುಂದಕ್ಕೆ ಓದಬೇಕು ಎಂಬ ಇಚ್ಛೆಯಿದ್ದರೂ, ಸರಸ್ವತಿ ಕೊಂಚ ನಾಚಿಕೊಂಡು ಲಕ್ಷ್ಮಿಗೆ ದಾರಿ ಮಾಡಿ ಕೊಟ್ಟಿದ್ದಳು, ಅಂದರೆ ಜೀವನೋಪಾಯಕ್ಕೆ ದುಡಿಯಬೇಕಿದ್ದರಿಂದ, ಹೊಲದಲ್ಲಿ ದುಡಿಯುವುದೇ ಮುಖ್ಯವಾಗಿತ್ತು..
ಹೀಗೆ ಬೆಳೆದಂಗೆ.. ಇವರಿಬ್ಬರ ಮಧ್ಯೆ ವಯೋಸಹಜವಾದ ಆಕರ್ಷಣೆ ಬೆಳೆಯಿತು.. ಒಂದಾಗೋಕೆ ಏನೂ ಅಡ್ಡಿಯಿರಲಿಲ್ಲ.. ಒಂದು ದಿನ ಪರಮು ಹೊಲದಲ್ಲಿ ಕೆಲಸ ಮಾಡುತಿದ್ದಾಗ "ಪಾರು ಬಾರೆ ಇಲ್ಲಿ ಒಂದು ಚೂರು ಮಾತಾಡಬೇಕು" ಎಂದ
"ಪರಮು ಹೊಲಕ್ಕೆ ಬಿಡ್ತಾ ಇದ್ದೀನಿ. ಊಟದ ಸಮಾಯವಾಗ್ತಾ ಇದೆ.. ಅಲ್ಲಿ ಮಾವಿನ ಮರದ ನೆರಳಿಗೆ ಹೋಗಿ ಕೂತ್ಕೊಂಡಿರು. .ನೀರು ಬಿಟ್ಟು ಬರ್ತೀನಿ.. ಊಟ ಮಾಡ್ತಾ ಮಾತಾಡೋಣ"
ಚಿತ್ರಕೃಪೆ - ಗೂಗಲೇಶ್ವರ |
ಊಟದ ಸಮಯವಾಯಿತು.. ಪಾರು ನೆಡೆದುಕೊಂಡು ಬರುತ್ತಿದ್ದನ್ನು ಕಂಡು ಅವಳನ್ನೇ ದೃಷ್ಟಿಸಿ ನೋಡಿದ.. ಎಂದೂ ಆ ರೀತಿಯಲ್ಲಿ ನೋಡಿರಲಿಲ್ಲ .. ಇಂದೇಕೋ ವಿಶೇಷ ಅನಿಸಿತು..
ಹತ್ತಿರ ಬಂದ ಪಾರು ತನ್ನನ್ನೇ ನೋಡುತ್ತಿದ್ದ ಪರಮುವನ್ನು "ಏನು ಸಾಹೇಬರು ನೋಡ್ತಾನೆ ಇದ್ದೀರಾ ಏನು ಸಮಾಚಾರ"
ಅಷ್ಟೊತ್ತಿಗೆ ಪರಮು ಡಬ್ಬಿಯಲ್ಲಿ ತಾನು ಮಾಡಿದ್ದ ರಾಗಿ ಮುದ್ದೆಯನ್ನು ತೆಗೆದು ಇಬ್ಬರಿಗೂ ತಟ್ಟೆಯಲ್ಲಿ ಹಾಕಿ, ಅದಕ್ಕೆ ಪಾರು ಮಾಡಿದ್ದ ಅವರೆಕಾಳಿನ ಹುಳಿ ಹಾಕಿ, ಪಕ್ಕದಲ್ಲಿ ಒಂದು ಪುಟ್ಟ ಈರುಳ್ಳಿ, ಹಸಿರು ಮೆಣಸಿನ ಕಾಯಿ ಇಟ್ಟಿದ್ದ"
ಚಿತ್ರಕೃಪೆ - ಗೂಗಲೇಶ್ವರ |
ದಿನವೂ ಹೀಗೆ ಮಾಡ್ತಾ ಇದ್ದರು, ಒಬ್ಬರು ಒಂದು ಅಡಿಗೆ ಮಾಡಿದರೆ ಅದಕ್ಕೆ ಪೂರಕವಾಗಿ ಇನ್ನೊಬ್ಬರು ಅಡಿಗೆ ಮಾಡಿಕೊಂಡು ಬರುತ್ತಿದ್ದರು.. ಉಳಿದದ್ದು ಅನ್ನುವ ಪ್ರಶ್ನೆಯೇ ಬರುತ್ತಿರಲಿಲ್ಲ.. ಯಾಕೆ ಅಂದರೆ ಎಷ್ಟು ಬೇಕೋ ಅಷ್ಟೇ ಮಾಡಿಕೊಂಡು ಬರುತ್ತಿದ್ದರು.. ರಾತ್ರಿಗೆ ಹೊಸ ಅಡಿಗೆ.. ಹೀಗೆ ಸಾಗುತಿತ್ತು ಅವರ ಬದುಕು..
ಮತ್ತೆ ಕತೆಗೆ ಮರಳಿದರೆ .. ಪಾರು ಕೇಳಿದ ಪ್ರಶ್ನೆ ಕೇಳಿ ಒಮ್ಮೆ ಮೈಜಾಡಿಸಿಕೊಂಡು.. "ಪಾರು.. ಪಾರು"
"ಪರಮು ನನ್ನ ಹೆಸರು ಪಾರು ಅಂತ ಗೊತ್ತು ..ವಿಷಯ ಹೇಳು"
"ಪಾರು ಪಾರು ಪಾರು.. ನನ್ನ ಮದುವೆ ಆಗ್ತೀಯೇನೇ"
ಕೈಯಲ್ಲಿದ್ದ ತಟ್ಟೆಯನ್ನು ಮೆಲ್ಲಗೆ ಕೆಳಗೆ ಇಟ್ಟಳು.. ಪಾರು.. ಆಕಾಶ ನೋಡುತ್ತಾ ಕೆಲವು ಕಾಲ ಹಾಗೆ ಕೂತಳು!!!
ಪರಮು ಮನಸ್ಸಲ್ಲಿ "ಹೃದಯದಲಿ ಇದೇನಿದು ನದಿಯೊಂದು ಓಡಿದೆ" ಹಾಡು ಸಾಗುತಿತ್ತು!!!
ಮುಂದೆ.......
ಪೇಪರ್ ಅಂತ ಕೂಗುತ್ತಾ ಟಪ್ ಅಂತ ಮನೆ ಮುಂದೆ ಸದ್ದಾಯಿತು..
ಮನೆ ಮುಂದೆ ರಂಗೋಲಿ ಹಾಕಲು ಮನೆ ಬಾಗಿಲು ತೆಗೆದು ಹೊರಗೆ ಬಂದರು.. ಬಗ್ಗಿ ಪೇಪರ್ ತೆಗೆದುಕೊಂಡು ಒಮ್ಮೆಲೇ ಹೆಡ್ ಲೈನ್ ನೋಡಿ.. ಹರುಷದಿಂದ ರೀ ಅಂತ ಕೂಗುತ್ತಾ ಒಳಗೆ ಬಂದರು..
ಆಗ ತಾನೇ ಸಂಧ್ಯಾವಂದನೆ ಮುಗಿಸಿದ್ದರು.. ಮಡದಿಯ ಕೂಗಿಗೆ ಏನು ಅಂತ ಕಣ್ಣಲ್ಲೇ ಪ್ರಶ್ನೆ ಕೇಳಿದರು..
PSLV-C57/Aditya-L1 Mission launched and it is safe in the orbit...am so happy....
Bharath is really doing great...under Modi ji!
ಒಂದು ಕ್ಶಣ ಅವಕ್ಕಾದರು ಮಡದಿಯ ಇಂಗ್ಲಿಷ್ ಭಾಷೆ ಕೇಳಿ.. ಕೊಂಚ ಕ್ಷಣದಲ್ಲಿಯೇ ಅರಿವಾಯಿತು.. ಅಕ್ಟೋಬರ್ ೨೦೨೦ ರಲ್ಲಿ ಇಲ್ಲಿಗೆ ಬಂದ ಮೇಲೆ ಓದುವ ಹಂಬಲ ಜಾಸ್ತಿಯಾಗಿ ಸರಸ್ವತಿ ವಿದ್ಯಾಲಯದಲ್ಲಿ ಪದವಿ ಓದುತ್ತಿದ್ದಳು.. ಇದೆ ಅಕ್ಟೋಬರ್ ೨೦೨೩ ರಲ್ಲಿ ಅಂತಿಮ ಪರೀಕ್ಷೆ ಇದ್ದು.. ಯಾವುದೇ ವಿಷಯ ಬಾಕಿ ಉಳಿಸಿಕೊಳ್ಳದೆ ವಿಶಾಲಾಕ್ಷಿ ಬಿ ಎ ಅಂತ ಬೋರ್ಡ್ ಕೂಡ ಬರೆಸಿಕೊಂಡು ಇಟ್ಟುಕೊಂಡಿದ್ದು ನೆನಪಾಯಿತು.. . ಇಂಗ್ಲೀಷಿನಲ್ಲಿ ನಿರರ್ಗಳವಾಗಿ ಮಾತಾಡುತ್ತಿದ್ದಳು . ದೇಶ, ಭಾಷೆ, ರಾಜಕೀಯ, ಕ್ರೀಡೆ, ಸಿನಿಮಾ ಎಲ್ಲವೂ ಕರತಲಾಮಲಕವಾಗಿತ್ತು..ಯಾವುದೇ ವಿಷಯ ಅವಳಿಗೆ ಎಟುಕುತ್ತಿತ್ತು.. ಪರೀಕ್ಷಾ ಕಾಲ.. ಪದವಿ ಪರೀಕ್ಷೆಗೆ ಬಿಟ್ಟು ಬೇರೆ ಯಾವುದೇ ವಿಷಯವನ್ನು ಗಮನಿಸುತ್ತಿರಲಿಲ್ಲ.. ಅಷ್ಟು ಉತ್ಸಾಹ ಓದಿನಲ್ಲಿ.. ಪರೀಕ್ಷೆ ಮುಗಿದಿತ್ತು.. ಹಾಗಾಗಿ ಹಿಂದಿನ ಮಾಸದ ದಿನಪತ್ರಿಕೆಗಳನ್ನು ಒಂದೊದಾಗಿ ಓದುತ್ತಿದ್ದಳು..
ಹೌದು ಕಣೆ.. ನಿಜಕ್ಕೂ ನಮ್ಮ ಭಾರತ ಪುಣ್ಯ ಮಾಡಿದೆ.. ಆದರೆ ನನ್ನ ದುರಾದೃಷ್ಟ ನಾನು ಮೋದಿಗೆ ಮತದಾನ ಮಾಡಲು ಆಗಲಿಲ್ಲ ನೀನೆ ಪುಣ್ಯವಂತೆ ೨೦೧೪ ಮತ್ತು ೨೦೧೯ ರ ಲೋಕಸಭೆ ಚುನಾವಣೆಯಲ್ಲಿ ಮುರುಳಿ ಕರೆದುಕೊಂಡು ಹೋಗಿ ಮತದಾನ ಮಾಡಿಸಿದ್ದ.. ಮೋದಿ ಗೆಲುವಲ್ಲಿ ನಿನ್ನ ಮತದ ಪಾತ್ರವೂ ಇದೆ ಎಂದು ಖುಷಿಯಾಗಿದೆ...
ಹೌದು ಕಣ್ರೀ ನೀವು ಹೇಳೋದು ಸರಿ.. ಭಾರತ ನಿಜಕ್ಕೂ ಪುಣ್ಯ ಮಾಡಿದೆ.. ಮೋದಿಯಂತಹ ನಾಯಕತ್ವ ದೊರಕಿರುವುದು.. ನಿಮಗೆ ಇನ್ನೊಂದು ವಿಷಯ ಗೊತ್ತೇ.. ?
ಅಪ್ಪ ಮಾತಾಡುತ್ತಿದ್ದದ್ದು ಕಡಿಮೆ ಆದರೆ ಕಿವಿ ಮಂದವಾಗಿದ್ದರೂ ಎಲ್ಲವನ್ನೂ ಅರಿಯುತ್ತಿದ್ದರು.. ಎಲ್ಲಾ ವಿಚಾರಗಳೂ ಗೊತ್ತಾಗುತಿತ್ತು..
ಏನು ವಿಚಾರ..
ನೀವು ಕಳ್ಳರು ಎಲ್ಲವೂ ಗೊತ್ತಿದೆ ಸುಮ್ಮನೆ ಕತೆ ಬಿಡ್ತಾ ಇದ್ದೀರಾ.. ಕೃಷ್ಣವೇಣಿ ದಿನವೂ ದೇವರ ದೀಪ ಹಚ್ಚಿ ಪೂಜೆ ಮಾಡುವಾಗ ಅವಳ ಪ್ರಾರ್ಥನೆ ಕೇಳಿಸಿಕೊಂಡು ಆಶೀರ್ವಾದ ನೀಡಿದ್ದೀರಾ ಸುಮ್ಮನೆ ಕತೆ ಬಿಡ್ತೀರಾ.. ನೀವೇ ಹೇಳಿ..
ಇಲ್ಲ ಕಣೆ ನೀನು ಹೇಳು.. ಆ ಖುಷಿ ನಿನ್ನಿಂದಲೇ ಅರಿವಾಗಲಿ.. ನಿನ್ನ ನಗು ಮೊಗ ನೋಡುವುದು ಒಂದು ಖುಷಿ..
ರೀ ನಮ್ಮ ಮೊಮ್ಮಗ ಆದಿತ್ಯ ಹೆಚ್ಚಿನ ಓದಿಗಾಗಿ ಇಂಗ್ಲೆಂಡಿನ ಕಾರ್ಡಿಫ್ ಪ್ರದೇಶದ ಕಾಲೇಜಿಗೆ ಹೋಗಿದ್ದಾನೆ . ನನಗೊಂತು ಬಹಳ ಖುಷಿ.. ಇಂಗ್ಲೆಂಡಿನ ಲಂಡನ್ ಸಮೀಪ ಇರುವ ಊರಿನಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಅವನ ಬದುಕಿಗೆ ಉತ್ತಮ ಅಡಿಪಾಯ ಹಾಕಿಕೊಡುವುದು.. ಕೃಷ್ಣವೇಣಿ ತನ್ನ ಬದುಕನ್ನೇ ಮಗನಿಗೆ ಮುಡಿಪಾಗಿಟ್ಟಿದ್ದಾಳೆ... ಅದು ನಿಜಕ್ಕೂ ಸಾರ್ಥಕ ಕ್ಷಣ..
ಹೌದು ಕಣೆ.. ಪಾಪ ಆ ಮಗು ನಮ್ಮ ಮನೆಗೆ ತನ್ನ ಬದುಕನ್ನೇ ಮೀಸಲಿಟ್ಟಿದೆ.. ವಿಜಯ, ಶ್ರೀಕಾಂತ, ಮುರುಳಿ ಎಲ್ಲರ ವೃತ್ತಿ ಬದುಕಿನ ಆರಂಭಕ್ಕೆ ಅವಳೇ ಕಾರಣಕರ್ತೆ.. ಇಂದು ಎಲ್ಲರೂ ಬದುಕಿನಲ್ಲಿ ಒಂದು ಹಂತ ತಲುಪಿ ಗುರಿ ಸಾಧಿಸಿದ್ದಾರೆ ಎಂದರೆ ಅವಳ ಶ್ರಮ ಬಹಳ ಇದೆ..
ಹೌದು ಕಣ್ರೀ.. ಆದಿತ್ಯ ಕೂಡ ತುಂಟ ಹುಡುಗ. ಆದರೆ ವಿಮಾನ ನಿಲ್ದಾಣದಲ್ಲಿ ಬಹಳ ಜವಾಬ್ಧಾರಿಯಿಂದ ನೆಡೆದುಕೊಂಡ.. ತನ್ನ ಅಮ್ಮನನ್ನ ತಬ್ಬಿ ಹಿಡಿದು.. ಅಳಬಾರದು.. ಓದುತ್ತೇನೆ, ಬರುತ್ತೇನೆ... ಒಂದು ಕರೆ ಮಾಡು ಸಾಕು ಏನೇ ಸಮಸ್ಯೆ ಇದ್ದರೂ ನಾನಿದ್ದೇನೆ.. ಎಂದು ಹೇಳಿದಾಗ ನಿಜಕ್ಕೂ ಇಲ್ಲಿಂದ ನನಗೆ ಕಣ್ಣು ತುಂಬಿ ಬಂದಿತ್ತು.. ಕೃಷ್ಣವೇಣಿ ಅಳಲಿಲ್ಲ.. ಆದರೆ ಅವಳ ಕಣ್ಣಲ್ಲಿ ನೀರಿತ್ತು.. ಆದರೆ ಅದು ದುಃಖದ ಕಣ್ಣೀರಲ್ಲ ಬದಲಿಗೆ ಅವಳ ಜೀವನ ಪರಿಶ್ರಮದ ಬೆವರು ಕಣ್ಣುಗಳಲ್ಲಿ ಕಂಡಿತ್ತು. ಸಾಧಿಸಿದ ಮುಖಭಾವ.. ಸಾಧಿಸಿದ ಸಂತೃಪ್ತಿ ....!
ನಿಜಕ್ಕೂ ಅನುಗ್ರಹ ಸದನದ ಅನುಗ್ರಹಿತ ಕ್ಷಣಗಳು ಅಂದ್ರೆ ಇವೆ ಕಣೆ.
ಪುಟ್ಟ ಮಗುವಾಗಿದ್ದಾಗ ಯಾರಾದರೂ ಎತ್ತಿಕೊಂಡರೆ ಅಮ್ಮನ ಹತ್ತಿರ ಹೋಗಬೇಕು ಎನ್ನುವುದನ್ನು ಮುದ್ದು ಮುದ್ದಾಗಿ ಅಮ್ಮತ್ತಾ ಅಮ್ಮತ್ತಾ ಎಂದು ತೊದಲು ಭಾಷೆಯಲ್ಲಿ ಹೇಳುತ್ತಿದ್ದ ಇಂದು ಅಮ್ಮನಿಂದ ಸಾವಿರಾರು ಮೈಲಿಗಳು ದೂರಕ್ಕೆ ಹೋಗಿ ಅಲ್ಲಿ ಓದಲು ಹೋಗಿದ್ದಾನೆ.. ಅವನೇ ಬಟ್ಟೆ ಒಗೆದುಕೊಂಡು, ಅಡಿಗೆ ಮಾಡಿಕೊಂಡು ಜವಾಬ್ಧಾರಿಯಿಂದ ನೆಡೆದುಕೊಳ್ಳುತ್ತಿದ್ದಾನೆ..
ಆದಿತ್ಯ ಮಗು.. ನಮ್ಮ ಮನೆಯಿಂದ ಓದಲು ವಿದೇಶಕ್ಕೆ ಹಾರಿದ್ದೀಯಾ.. ನಿನ್ನ ಗುರಿ ಮುಟ್ಟುವ ಹಾದಿಯಲ್ಲಿ ಯಾವುದೇ ಅಡೆತಡೆಗಳು ಬರಬಾರದು.. ಯಾವುದೇ ಅಡಚಣೆಗಳು ನಿನಗೆ ಅಡ್ಡಿಯಾಗಬಾರದು.. ನಿನ್ನ ಗಮನ ನಿನ್ನ ಅಮ್ಮನ ಗುರಿ ತಲುಪುವುದಷ್ಟೇ ಮುಖ್ಯವಾಗಿರಬೇಕು.. ಇನ್ಯಾವುದೇ ಅಡ್ಡಿ ಆತಂಕಗಳು ಬರಬಾರದು.. ಅದೇನೇ ಬಂದರೂ ನಿನ್ನ ಅಜ್ಜಿ ತಾತನನ್ನು ನೆನೆಸಿಕೋ.. ಆ ಕ್ಷಣದಲ್ಲಿ ಅದನ್ನು ದೂರ ಮಾಡುತ್ತೇವೆ..
ಹೌದು ಕಣ್ರೀ ಒಳ್ಳೆಯ ಮಾತು.. ಸೆಪ್ಟೆಂಬರ್ ಮಾಸದಲ್ಲಿ ಆದಿತ್ಯನ ಕಡೆ ಪ್ರಪಂಚವೇ ನೋಡುತ್ತಿತ್ತು..
ಒಂದು PSLV-C57/Aditya-L1
ಇನ್ನೊಂದು ಆದಿತ್ಯ ಕಶ್ಯಪ್
ಆದಿತ್ಯ ಎಲ್ ೧ ಉಡಾವಣೆ .. ಪ್ರಪಂಚವೇ ನಮ್ಮ ಭಾರತದ ಕಡೆ ನೋಡುವಂತೆ ಮಾಡಿದೆ.. ಸೂರ್ಯನ ಹತ್ತಿರ ನಿಂತು ಸೂರ್ಯನ ವಲಯದಲ್ಲಿ ಆಗುವ ಬದಲಾವಣೆಗಳನ್ನು ನೋಡುವುದಕ್ಕೆ ಈ ಉಡಾವಣೆ ಉಪಯೋಗಕ್ಕೆ ಬರುತ್ತದೆ..
ಆದಿತ್ಯ ಕಶ್ಯಪ್ ಸಾಗರಗಳನ್ನು ದಾಟಿ ಲಂಡನ್ನಿಗೆ ಹೋಗಿದ್ದಾನೆ .. ತಲುಪಿದ್ದಾನೆ.. ಬೆಳೆಯುತ್ತಿದ್ದಾನೆ. ಅವನ ಬೆಳೆವಣಿಗೆಯನ್ನು ಕೋರವಂಗಲ ಕುಟುಂಬ ಎದುರು ನೋಡುತ್ತಿದೆ..
ಎರಡೂ ಯೋಜನೆಗಳಿಗೆ ಯಶಸ್ಸಾಗಲಿ ಎಂದು ನಮ್ಮ ಶುಭಹಾರೈಕೆಗಳು..
ಶುಭವಾಗಲಿ ಮಗು ಹೋಗಿ ಬಾ.. ಜಯಶಾಲಿಯಾಗಿ ಹಿಂದಿರುಗು... ಅಮ್ಮನ ಆಶೀರ್ವಾದ ಸದಾ ಇದೆ. !!!
ಜೊತೆಗೆ ಜನುಮದಿನದ ಶುಭ ಹಾರೈಕೆಗಳು ನಿನಗೆ.. !
ಇಂತಿ ನಿನ್ನ ಅಜ್ಜಿ ತಾತಾ!!!
ಅದೊಂದು ಸಣ್ಣ ಹಳ್ಳಿ ... ಹೊಯ್ಸಳರ ಆಳ್ವಿಕೆಗೆ ಒಳಗಾಗಿದ್ದ ಪ್ರದೇಶ.ನೂರಾರು ಕುಟುಂಬಗಳು ಬಾಳಿ ಬದುಕಿದ್ದ ಹಳ್ಳಿಯದು.. ಹತ್ತಾರು ವಕ್ಕಲುಗಳು ವ್ಯವಸಾಯವನ್ನೇ ದುಡಿಮೆ ಮಾಡಿಕೊಂಡಿತ್ತು.. ಕೆಲವಾರು ಕುಟುಂಬಗಳು ಶಾನುಭೋಗಿಕೆ ಮಾಡಿಕೊಂಡಿದ್ದವು..
ಹಾಸನದ ಬಳಿಯ ಕೋರವಂಗಲ |